![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆಸಲ್ಪಡುವ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 6ನೇ ತರಗತಿ ವಿದ್ಯಾರ್ಥಿ ಲವಿತ್ ಕುಮಾರ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನು ಸತ್ಯನಾರಾಯಣ ಗೌಡ ಹಾಗೂ ಜಯಶೀಲ ದಂಪತಿಗಳ ಪುತ್ರ. ಅದೇ ರೀತಿ 8ನೇ ತರಗತಿಯ ಹಾರ್ದಿಕ್ ಬಿ ಎಲ್(ಬಿ ಲಿಂಗಪ್ಪ ಹಾಗೂ ಭಾರತಿ ದಂಪತಿಗಳ ಪುತ್ರ)ಈತನು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಪಡೆದಿರುತ್ತಾನೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.