ಉಪ್ಪಿನಂಗಡಿ:ಶ್ರೀರಾಮ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ

0

ಉಪ್ಪಿನಂಗಡಿ:ಶ್ರೀರಾಮ ಶಾಲೆ, ವೇದಶಂಕರ ನಗರ ಕೃಷ್ಣ ಜನ್ಮಾಷ್ಠಮಿ ಆಚರಣೆ ಆ.6ರಂದು ನಡೆಯಿತು.ಮಕ್ಕಳಿಂದ ನಿರಂತರವಾಗಿ ಎರಡು ಗಂಟೆಗಳ ಕಾಲ ಭಜನಾ ಸೇವೆ ನಡೆಯಿತು.ಕೃಷ್ಣನ ಬಾಲ ಲೀಲೆಗಳನ್ನು, ಜೊತೆಗೆ, ಅವರು ಸಮಾಜಕ್ಕೆ ನೀಡಿದ ಸಂದೇಶಗಳು, ಪ್ರಸ್ತುತ ಸಮಾಜದಲ್ಲಿ ಅವರ ಆದರ್ಶಗಳನ್ನು ಪಾಲಿಸಲೇಬೇಕಾದ ಅನಿವಾರ್ಯತೆಗಳ ಬಗ್ಗೆ ಅಕ್ಷತಾ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ ಪೊರೋಳಿ, ಪೋಷಕ ಸಂಘದ ಅಧ್ಯಕ್ಷ ಮೋಹನ್ ಭಟ್.ಪಿ ಮತ್ತು ಪ್ರೌಢವಿಭಾಗದ ಮುಖ್ಯಗುರು ರಘುರಾಮ ಭಟ್.ಸಿ ಪ್ರಾಥಮಿಕ ವಿಭಾಗದ ಮುಖ್ಯಗುರು ವಿಮಲ ಉಪಸ್ಥಿತರಿದ್ದರು. ಶಿಲ್ಪಾ.ಸಿ ಸ್ವಾಗತಿಸಿ, ಸೌಮ್ಯ ನಿರೂಪಿಸಿ ನೀತಾ ಇವರು ವಂದಿಸಿದರು.

LEAVE A REPLY

Please enter your comment!
Please enter your name here