ಕೊಂಬೆಟ್ಟು ಕಾಲೇಜಿನಲ್ಲಿ ಸಸ್ಯ ಶ್ಯಾಮಲಾ ತಾಲೂಕು ಮಟ್ಟದ ಕಾರ್ಯಕ್ರಮ

0

ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆಮೂಡಿಸುವ ಕೆಲಸ ನಡೆಯಬೇಕು: ಅಶೋಕ್ ರೈ


ಪುತ್ತೂರು: ವಿದ್ಯಾರ್ಥಿಗಳಿಗೆ ಪರಸರದ ಬಗ್ಗೆ ಪ್ರಜ್ಞೆ ಮೂಡಿಸುವ ಕೆಲಸವನ್ನು ಶಿಕ್ಷಕರು ಮತ್ತು ಅರಣ್ಯ ಇಲಾಖೆ ಮಾಡಬೇಕು ಆ ಮೂಲಕ ಅವರಿಗೆ ಪರಿಸರ, ಗಿಡ ಮರದ ಬಗ್ಗೆ ಪ್ರೀತಿ ಮೂಡುವಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಕೊಂಬೆಟ್ಟು ಪ ಪೂ ಕಾಲೇಜಿನ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರು ಮತ್ತು ಸರಕಾರಿ ಪ ಪೂ ಕಾಲೇಜು ಕೊಂಬೆಟ್ಟು ಇದರ ವತಿಯಿಂದ ನಡೆದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಇಂದು ನಮ್ಮ ಪರಿಸರದಲ್ಲಿ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿಂದೆ ರಸ್ತೆ ಬದಿಗಳಲ್ಲಿ ಸಾಕಷ್ಟು ಮರಗಳಿದ್ದವು ಆದರೆ ಅದು ಈಗ ನಾಶವಾಗಿದೆ. ಮರಗಳನ್ನು ಬೆಳೆಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ನಮಗೆ ಇಲ್ಲಿ ಉಸಿರಾಡಲು ಸಾಧ್ಯವಿಲ್ಲದಂತ ವಾತಾವರಣ ಸೃಷ್ಟಿಯಾಗಬಹುದು. ಪ್ರತೀಯೊಬ್ಬ ವಿದ್ಯಾರ್ಥಿ ತನ್ನ ಮನೆಯಲ್ಲಿ ಅಥವಾ ತನ್ನ ಊರಿನ ಪರಿಸರದಲ್ಲಿ ಗಿಡವನ್ನು ನೆಟ್ಟು ಪೋಷಿಸಬೇಕು ಇದಕ್ಕೆ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆ ಉತ್ತೇಜವನ್ನು ನೀಡಬೇಕು ಎಂದು ಹೇಳಿದರು. ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಪುತ್ತೂರು ತಾಲೂಕಿನಾದ್ಯಂತ ಸಸ್ಯ ಶ್ಯಾಮಲಾ ಯೋಜನೆಯಡಿ 5000 ಗಿಡಗಳನ್ನು ನೆಡುವ ಯೋಜನೆಯನ್ನು ಹಾಕಿಕೊಂಡಿದ್ದು ಇದು ಉತ್ತಮ ಬೆಳವಣಿಗೆಯಾಗಿದೆ, ಎಲ್ಲೆಲ್ಲಿ ಖಾಲಿ ಜಾಗ ಇದೆಯೋ ಅಲ್ಲೆಲ್ಲಾ ಗಿಡಗಳನ್ನು ನೆಡುವ ಕೆಲಸ ನಡೆಯಬೇಕು ಇದಕ್ಕೆ ನನ್ನ ಸಂಪೂರ್ಣ ಪ್ರೋತ್ಸಾಹ ಇದೆ ಎಂದು ಹೇಳಿದರು.


ಶಾಲಾ ಕಾಲೇಜುಗಳ ಆವರಣದಲ್ಲಿ ೫೦ ಲಕ್ಷ ಗಿಡಗಳನ್ನು ಜಿಲ್ಲೆಯಾದ್ಯಂತ ನೆಡುವ ಸರಕಾರದ ಹೊಸ ಯೋಜನೆಯನ್ನು ಪುತ್ತೂರಿನಲ್ಲಿ ಉದ್ಘಾಟನೆ ಮಾಡಲಾಗಿದೆ. ಪುತ್ತೂರಿನಾದ್ಯಂತ ಶಾಲಾ ಕಾಲೇಜು ವಠಾರದಲ್ಲಿ ಗಿಡಗಳನ್ನು ನೆಡುವ ಕಾರ್ಯ ಮುಂದುವರಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರು ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ಪ್ರಾಂಶುಪಾಲರಾದ ಗೋಪಾಲಕೃಷ್ಣ ಗೌಡ,ದ ಕ ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ಯಾಮಲ ಎಂ, ರಾಷ್ಟ್ರೀಯ ಪ್ರಶಶ್ತಿ ವಇಜೇತ ಶಿಕ್ಷಕರಾದ ಕೋಟಿಯಪ್ಪ ಪೂಜಾರಿ, ಸೇರ, ಶಾಲಾ ಎಸ್‌ಡಿಎಂಸಿ ಕಾಯಾಧ್ಯಕ್ಷ ಜೋಫಕಿಂ ಡಿಸೋಜಾ, ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಕಡಬ ತಾಲೂಕು ಸಹಸಿಕ್ಷಕರ ಸಂಘದ ಕೋಶಾಧಿಕಾರಿ ಶ್ರೀಲತಾ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ವಸಂತ ಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here