ತೆರಿಗೆ ಹಣ ದುರುಪಯೋಗ ಸಹಿತ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಆರೋಪ

0

ಪುತ್ತೂರು ನಗರಸಭಾ ಬಿಜೆಪಿ ಸದಸ್ಯರಿಂದ ಪ್ರತಿಭಟನೆಗೆ ಸಿದ್ದತೆ


ಪುತ್ತೂರು: ನಗರಸಭೆಯ ತೆರಿಗೆ ಹಣವನ್ನು ಶಾಸಕರ ಕಚೇರಿ ನವೀಕರಣಕ್ಕೆ ದುರುಪಯೋಗ, ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಅನುಷ್ಠಾನ ವಿಳಂಬ, ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವಿಳಂಬದಿಂದ ಕಾಂಗ್ರೆಸ್ ಸರಕಾರ ವೈಫಲ್ಯವಾಗಿದೆ ಎಂದು ಆರೋಪಿಸಿ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಿಂದ ಶೀಘ್ರದಲ್ಲಿ ಪ್ರತಿಭಟನೆ ನಡೆಸುವ ಸಲುವಾಗಿ ಸೆ.11ರಂದು ಬಿಜೆಪಿ ಕಚೇರಿಯಲ್ಲಿ ಸದಸ್ಯರು ಸಭೆ ನಡೆಸಿದರು.


ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರ ಅಧ್ಯಕ್ಷತೆಯಲ್ಲಿ ನಗರಸಭಾ ಸದಸ್ಯರುಗಳ ಸಭೆ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು, ನಿಕಟ ಪೂರ್ವ ನಗರ ಸಭಾಧ್ಯಕ್ಷ ಕೆ ಜೀವಂಧರ್ ಜೈನ್, ಬಿಜೆಪಿ ಮಂಗಳೂರು ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ಹಾಗೂ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದಾರೆ.

LEAVE A REPLY

Please enter your comment!
Please enter your name here