ಸೆ.14: ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ನೆಲ್ಯಾಡಿಯಲ್ಲಿ ಉದ್ಘಾಟನೆ

0

ನೆಲ್ಯಾಡಿ: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಸೆ.14ರಂದು ನೆಲ್ಯಾಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸೈಂಟ್ ಮೇರೀಸ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ.ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತೆಂಗು ಕೊಯ್ಲುಗಾರರಿಗೆ ಉಚಿತ ವಿಮಾ ಯೋಜನೆ ನೋಂದಾವಣೆಯೂ ನಡೆಯಲಿದೆ.


ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ರವರು ದೀ ಪ್ರಜ್ವಲನೆ ಮಾಡಲಿದ್ದಾರೆ. ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿ.ಪಂ.ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಸರ್ವೋತ್ತಮ ಗೌಡ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್‌ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಲ್ಪಸಮೃದ್ಧಿ ಯೋಜನೆಯಡಿ ಠೇವಣಿಗಳಿಗೆ ಶೇ.12ರಷ್ಟು ಆಕರ್ಷಕ ಬಡ್ಡಿದರ ನೀಡಲಾಗುವುದು. ಈ ಯೋಜನೆ ಸೀಮಿತ ಅವಧಿಗೆ ಮಾತ್ರವಿದ್ದು ಸದುಪಯೋಗಪಡಿಸಿಕೊಳ್ಳುವಂತೆ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here