ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದಿಂದ ಮೊಸರು ಕುಡಿಕೆ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಕೊಂಬೆಟ್ಟು ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಯುವಕ ಮಂಡಲದ ಅಧ್ಯಕ್ಷ ತೇಜಸ್ ಕೊಂಬೆಟ್ಟು ಅಧ್ಯಕ್ಷತೆಯಲ್ಲಿ ಸೆ.10ರಂದು ನಡೆಯಿತು.

ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ ಉಪಾಧ್ಯಕ್ಷ ಕೃಷ್ಣಪ್ಪ ಕಂಬಳಕೋಡಿ ಕಾರ್ಯಕ್ರಮದ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ಹಿರಿಯರಾದ ಗೋಪಾಲ್ ನಾಯ್ಕ ಏಳ್ಮುಡಿ ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಲವು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಇದರ ಗೌರವಾಧ್ಯಕ್ಷ ಶ್ರೀಕಾಂತ್ ಕಂಬಳಕೋಡಿ, ಅಧ್ಯಕ್ಷ ತೇಜಸ್ ಕೊಂಬೆಟ್ಟು, ಉಪಾಧ್ಯಕ್ಷ ಕೃಷ್ಣಪ್ಪ ಕಂಬಳಕೋಡಿ, ಕಾರ್ಯದರ್ಶಿ ರಾಜೇಶ್ ಕೊಂಬೆಟ್ಟು, ಯುವಕ ಮಂಡಲದ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here