ಸಾರೆಪುಣಿಯಲ್ಲಿ ಬೈಕ್‌ಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ

0

ಪುತ್ತೂರು: ಕುಂಬ್ರ ಸಮೀಪದ ಸಾರೆಪುಣಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಸೆ.12ರಂದು ರಾತ್ರಿ ನಡೆದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


ಗಾಯಾಳುಗಳ ಪೈಕಿ ಒಬ್ಬರು ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಾಳುಗಳು ಎಲ್ಲಿಯವರು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದಾರೆ. ಎಸ್ಕೆಎಸ್ಸೆಸ್ಸೆಫ್ ಮುಖಂಡ ಅಶ್ರಫ್ ಸಾರೆಪುಣಿ, ಸ್ಥಳೀಯರಾದ ರಫೀಕ್, ಉಸ್ಮಾನ್, ಹಂಝ, ಇಬ್ರಾಹಿಂ, ರಿಕ್ಷಾ ಚಾಲಕರಾದ ತಾಜುದ್ದಿನ್, ಶಾಕಿರ್ ಮೊದಲಾದವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.

LEAVE A REPLY

Please enter your comment!
Please enter your name here