![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.19 ರಿಂದ 21ರವರೆಗೆ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 40ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.
![](https://puttur.suddinews.com/wp-content/uploads/2023/09/IMG-20230913-WA0202.jpg)
ಅರ್ಚಕರಾದ ರಾಮಕೃಷ್ಣ ಭಟ್, ಬಾಲಕೃಷ್ಣ ಐತಾಳ್, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಪ್ರಧಾನ ಕಾರ್ಯದರ್ಶಿಗಳಾದ ನ್ಯಾಯವಾದಿ ದೇವಾನಂದ ಕೆ, ಕಾರ್ಯದರ್ಶಿ ಯೋಗೀಶ್ ಸಾಮಾನಿ ಸಂಪಿಗೆದಡಿ, ಗೌರವ ಸಲಹೆಗಾರರಾದ ತಾ.ಪಂ. ಮಾಜಿ ಅಧ್ಯಕ್ಷ ಕೆ.ಜಯಾನಂದ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ನ್ಯಾಯವಾದಿ ಕುಮಾರನಾಥ ಎಸ್., ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಗ್ರಾ.ಪಂ. ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಪದ್ಮಲತಾ ಜಗನ್ನಾಥ ಶೆಟ್ಟಿ ನಡುಮನೆ, ಮಾಜಿ ಸದಸ್ಯೆ ಕುಸುಮ ಪೂಜಾರಿ ಗುಡ್ಡೆಮನೆ, ಸದಾಶಿವ ಸಾಮಾನಿ ಸಂಪಿಗೆದಡಿ ಮತ್ತಿತರರು ಉಪಸ್ಥಿತರಿದ್ದರು.