ನಿಡ್ಪಳ್ಳಿ:ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ನಗದು ಕಳವು

0

ಪುತ್ತೂರು: ನಿಡ್ಪಳ್ಳಿ ಗ್ರಾಮದ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿಯಿಂದ ನಗದು ಕಳವು ನಡೆದ ಬಗ್ಗೆ ಸೆ.13ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ಪೂಜೆಗೆಂದು ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ.ಕಳ್ಳರು ದೇವಳದ ನಮಸ್ಕಾರ ಮಂಟಪದಲ್ಲಿದ್ದ ಎರಡು ಕಾಣಿಕೆ ಡಬ್ಬಿಗಳ ಬೀಗ ಒಡೆದು ಅದರಲ್ಲಿದ್ದ ನಗದು ಕಳವು ಮಾಡಿದ್ದಾರೆ. ಘಟನೆಗೆ ಸಂಬಂಧಿಸಿ ಸಂಪ್ಯ ಪೊಲೀಸರಿಗೆ ದೂರು ನೀಡಲಾಗಿದೆ.

LEAVE A REPLY

Please enter your comment!
Please enter your name here