ನೇರ್ಲ ಶಾಲೆಯಲ್ಲಿ ನೂಜಿಬಾಳ್ತಿಲ ಕ್ಲಸ್ಟರ್ ಪ್ರತಿಭಾ ಕಾರಂಜಿ

0

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸೆ.13ರಂದು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ನೇರ್ಲ- ಇಚಿಲಂಪಾಡಿಯಲ್ಲಿ ನಡೆಯಿತು. ಕೌಕ್ರಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

S D M C ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ನೌಕರರ ಸಂಘ ಕಡಬ ತಾಲೂಕು ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್ ನೆಲ್ಯಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಡಬ ಇದರ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ, ಆಲಂಕಾರು ಕ್ಲಸ್ಟರ್ ಸಿಆರ್ ಪಿ ಪ್ರಕಾಶ್, ನೂಜಿಬಾಳ್ತಿಲ ಕ್ಲಸ್ಟರ್ ಸಿಆರ್ ಪಿ ಗೋವಿಂದ ನಾಯ್ಕ್, ಕೌಕ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಧ ಡೈಸಿ ವರ್ಗಿಸ್, ದಿನೇಶ್ ಬರಮೇಲು, ವಿಶ್ವನಾಥ ಕೊರಮೇರು, S D M C ಉಪಾಧ್ಯಕ್ಷೆ ಶ್ರೀಮತಿ ನಂದಕುಮಾರಿ, ನೇರ್ಲ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಶ್ರೀ ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಶ್ರೀ ಎಸ್ ರವರು ಸ್ವಾಗತಿಸಿದರು.


ನೂಜಿಬಾಳ್ತಿಲ ಶಾಲೆಯ ಶಿಕ್ಷಕರಾದ ಗಣೇಶ್ ನಡುವಾಳ್ ಕಾರ್ಯಕ್ರಮವನ್ನು ನಿರೂಪಿಸಿದರು. ನೇರ್ಲ ಶಾಲಾ ಶಿಕ್ಷಕರಾದ ಗಿರೀಶ್ ರವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ನೂಜಿಬಾಳ್ತಿಲ ಕ್ಲಸ್ಟರ್ ನ 8 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸುಮಾರು 25ಕ್ಕೂ ಅಧಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಹಿರಿಯ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ- ಇಚಿಲಂಪಾಡಿ ಮತ್ತು ದ್ವಿತೀಯ ಸಮುಗ್ರ ಪ್ರಶಸ್ತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೆಂಜಿಲಾಡಿ ಪಡೆದುಕೊಂಡಿತು. ಕಿರಿಯ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸ್ಯಾಂತೊಮ್ ವಿದ್ಯಾನಿಕೇತನ್ ಶಾಲೆ ರೆಂಜಿಲಾಡಿ ಮತ್ತು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ- ಇಚಿಲಂಪಾಡಿ ಪಡೆದುಕೊಂಡಿತು.

LEAVE A REPLY

Please enter your comment!
Please enter your name here