ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

0

ರಾಷ್ಟ್ರಪ್ರೇಮ, ಸೇವಾಭಾವನೆಗಳನ್ನು ಬೆಳೆಸುವ ಎನ್.ಎಸ್.ಎಸ್.: ವಿಜಯನಾರಾಯಣ ಕೆ.ಎಂ.

ಪುತ್ತೂರು: ಕಹಿ ಅನುಭವಗಳನ್ನು ಮರೆತು, ಸಿಹಿ ಅನುಭವಗಳನ್ನು ಮೆಲುಕು ಹಾಕುತ್ತಾ ಸಾಗುವುದೇ ಜೀವನ. ಅಂತಹ ಸಿಹಿ-ಕಹಿ ಅನುಭವ‌ಗಳ ಸಮ್ಮಿಲನವೇ ಎನ್‌.ಎಸ್‌.ಎಸ್‌ನ ವಾರ್ಷಿಕ ವಿಶೇಷ ಶಿಬಿರ. ಪ್ರತಿಫ‌ಲ ಬಯಸದೆ ಸೇವೆಯನ್ನು ಮಾಡುತ್ತಾ ಖುಷಿಯಿಂದ ಕಳೆದ ಆ ಆರು ದಿನಗಳ ಪ್ರತಿಯೊಂದು ಕ್ಷಣವು ಅವಿಸ್ಮರಣೀಯ ಎಂದು ಮಂಗಳೂರಿನ ಹಿರಿಯ ನ್ಯಾಯವಾದಿ ಶ್ರೀ ಅಶೋಕ್ ಅರಿಗ ಬಾರಿಕೆ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿಯುವುದರ ಜೊತೆಗೆ ಗ್ರಾಮದ ಜನರಲ್ಲಿ ಅರಿವು ಮತ್ತು ವಾಸ್ತವ ಪ್ರಜ್ಞೆ ಮೂಡಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ ಎಂ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ವಿದ್ಯಾರ್ಥಿಗಳಿಗೆ ಬದುಕಿನ ಅನುಭವ ನೀಡುವ ಚಟುವಟಿಕೆಯಾಗಿದೆ. ಇದರ ಧ್ಯೇಯ ವಾಕ್ಯ “ನನಗಲ್ಲ, ನಿನಗೆ” ಎಂಬುದು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ದಿಗೊಳಿಸುವುದಾಗಿದೆ. ಇದರ ಮೂಲ ತತ್ವ ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಒಳಗೊಂಡಂತಹ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರ ಪ್ರೇಮ ಮತ್ತು ಸೇವಾಭಾವನೆಗಳನ್ನು ಬೆಳೆಸುವುದಾಗಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯವು ನಿರಂತರವಾಗಿ ಇಂತಹ ಮೌಲ್ಯಯುತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಕಳೆದ 35 ವರ್ಷಗಳಲ್ಲಿ ನಿರತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಜಯಪ್ರಕಾಶ್ ಬದಿನಾರು, ನಿವೃತ್ತ ಶಿಕ್ಷಕಿ ಶ್ರೀಮತಿ ಲಕ್ಷ್ಮೀ ಆರ್ ರೈ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ., ಪುತ್ತೂರಿನ ವಕೀಲರು ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಶ್ರೀ ಕುಮಾರನಾಥ್, ಕೋಡಿಂಬಾಡಿ ಶಾಲೆಯ ಮುಖ್ಯಗುರುಗಳಾದ ಶ್ರೀ ಬಾಲಕೃಷ್ಣ ಎನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಶೇಖರ್ ಪೂಜಾರಿ ಹಾಗೂ ಶ್ರೀ ಸುರೇಶ್ ಶೆಟ್ಟಿ ಮಾತನಾಡಿ ಶುಭಹಾರೈಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಘಟಕದ ಸಂಯೋಜಕರಾದ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಏಳು ದಿನಗಳ ಕಾಲ ನಡೆದ ಶಿಬಿರದ ವರದಿಯನ್ನು ವಾಚಿಸಿ ಧನ್ಯವಾದ ಸಮರ್ಪಿಸಿದರು. ಎನ್ ಎಸ್ ಎಸ್ ಘಟಕದ ನಾಯಕ ಕೌಶಿಕ್ ಜೆ ಸ್ವಾಗತಿಸಿ, ಎನ್ ಎಸ್ ಎಸ್ ಸ್ವಯಂಸೇವಕರಾದ ನವನೀತ್ ಡಿ ಕೆ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಏಳು ದಿನಗಳ ಕಾಲ ಸಹಕರಿಸಿದವರಿಗೆ ಸನ್ಮಾನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ ವೃಂದ, ಕೋಡಿಂಬಾಡಿ ಶಾಲೆಯ ಶಿಕ್ಷಕರ ವೃಂದ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮಸ್ಥರು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

ವಿವೇಕಾನಂದ ಕಾನೂನು ಕಾಲೇಜಿಗೆ ಅಭಿನಂದನಾ ಪತ್ರ
ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕವು ಏಳು ದಿನಗಳ ಕಾಲ ಕೋಡಿಂಬಾಡಿ ಶಾಲಾ ವಠಾರದಲ್ಲಿ ನಡೆಸಿದ ಶ್ರಮದಾನ, ಗಾರ್ಡನ್ ನಿರ್ಮಾಣ, ಗ್ರಾಮ ಸಮೀಕ್ಷೆ ಹಾಗೂ ಸ್ವಚ್ಛತಾ ಆಂದೋಲನವನ್ನು ಮೆಚ್ಚಿಕೊಂಡ ಕೋಡಿಂಬಾಡಿ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಶಾಲೆಯ ಮುಖ್ಯಗುರುಗಳು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ.ಎಂ., ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಘಟಕದ ಸಂಯೋಜಕರಾದ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಅವರಿಗೆ ಸನ್ಮಾನ ಮಾಡಿ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here