ಹೊಸಮಜಲು: ಬೈಕ್‌ಗೆ ಕಾರು ಡಿಕ್ಕಿ-ಇಬ್ಬರಿಗೆ ಗಾಯ

0

ನೆಲ್ಯಾಡಿ: ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಕೌಕ್ರಾಡಿ ಗ್ರಾಮದ ಹೊಸಮಜಲು ಎಂಬಲ್ಲಿ ಸೆ.12ರಂದು ಸಂಜೆ ನಡೆದಿದೆ.


ಉತ್ತರ ಭಾರತ ಮೂಲದ ಪಿಂಟೂ ಮತ್ತು ವಿಶಾಲ್ ಗಾಯಗೊಂಡ ಬೈಕ್ ಸವಾರರಾಗಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಬೈಕ್(ಕೆಎ19, ಡಬ್ಲೂ 6596)ಗೆ ಕಾರು (ಕೆಎ 02, ಎಂಬಿ 5037) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಬೈಕ್ ಸಹಿತ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here