ಮುಂಡೂರು ಗ್ರಾ.ಪಂ ಜಮಾಬಂದಿ ಸಭೆ

0

ಪುತ್ತೂರು: ಮುಂಡೂರು ಗ್ರಾ.ಪಂ 2022-23ನೇ ಸಾಲಿನ ಜಮಾಬಂದಿ ಸಭೆ ಸೆ.14ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್.ಎಸ್.ಡಿ ಸರ್ವೆದೋಳಗುತ್ತು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸೂರಪ್ಪ. ಕೆ ಜಮಾ ಖರ್ಚು ವರದಿ ವಾಚಿಸಿದರು. ಪುತ್ತೂರು ತಾಲೂಕು ಅಕ್ಷರ ದಾಸೋಹ ಕೇಂದ್ರದ ಸಹಾಯಕ ನಿರ್ದೇಶಕರಾದ ವಿಷ್ಣುಪ್ರಸಾದ್ ಸಿ ಅವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು.

ಸಭೆಯಲ್ಲಿ ಕಳೆದ ಸಾಲಿನ ಕಾಮಗಾರಿಗಳ ವೀಕ್ಷಣೆ ಮಾಡಲಾಯಿತು. ಗ್ರಾ.ಪಂ ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಕರುಣಾಕರ ಗೌಡ ಎಲಿಯ, ಪ್ರವೀಣ್ ನಾಯ್ಕ, ಉಮೇಶ್ ಅಂಬಟ, ದುಗ್ಗಪ್ಪ ಕೆ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ ಪಿಡಿಒ ಅಜಿತ್ ಜಿ.ಕೆ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here