ಇಂದು(ಸೆ.15): ನೆಲ್ಯಾಡಿ ಜೇಸಿಐ ಜೇಸಿ ಸಪ್ತಾಹ ಸಮಾರೋಪ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್ ನೆಲ್ಯಾಡಿ ಇದರ ’ಜೇಸಿ ಸಪ್ತಾಹ-2023’ರ ಸಮಾರೋಪ ಸೆ.15ರಂದು ಸಂಜೆ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜೇಸಿಐ ಅಧ್ಯಕ್ಷ ದಯಾಕರ ರೈ ಕೆ.ಯಂ.ತಿಳಿಸಿದ್ದಾರೆ.

ವಲಯ ಉಪಾಧ್ಯಕ್ಷ ದೇವರಾಜ್ ಕುದ್ಪಾಜೆ ಉದ್ಘಾಟಿಸಲಿದ್ದಾರೆ. ಪುತ್ತೂರು ವಿದ್ಯಾಮಾತ ಅಕಾಡಮಿಯ ಭಾಗ್ಯೇಶ್ ರೈ, ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್‌ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನೆಲ್ಯಾಡಿ ಜೇಸಿಐ ಪೂರ್ವಾಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರಿಗೆ ಕಮಲಪತ್ರ ಪ್ರಶಸ್ತಿ ಪುರಸ್ಕಾರ, ಆರ್ಯಭಟ ಪ್ರಶಸ್ತಿ ವಿಜೇತ ವಿಶ್ವನಾಥ ಶೆಟ್ಟಿ ಹಾಗೂ ಉದ್ಯೋಗರತ್ನ ಪ್ರಶಸ್ತಿ ಪುರಸ್ಕೃತ ಜೋನ್ ಪಿ.ಎಸ್.ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here