ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್-ಬೆಟ್ಟಂಪಾಡಿ ಸರಕಾರಿ ಪಿಯು ಕಾಲೇಜು ತಂಡ ಜಿಲ್ಲಾ ಮಟ್ಟಕ್ಕೆ

0

ಪುತ್ತೂರು: ತಾಲೂಕು ಮಟ್ಟದ ಪಿಯು ವಿಭಾಗದ ಬಾಲಕ ಬಾಲಕಿಯರ ಪದವಿ ಪೂರ್ವ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೆ.12 ರಂದು ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ನವೋದಯ ಕ್ರೀಡಾಂಗಣದಲ್ಲಿ ನಡೆಯಿತು. ಕಾಲೇಜಿನ ಕಾರ್ಯಾಧ್ಯಕ್ಷ ಭಾಸ್ಕರ ಕರ್ಕೇರ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಸಯ್ಯದ್ ಫಾರೂಕ್.ಸಿ. ಸಭಾ ಅಧ್ಯಕ್ಷತೆ ವಹಿಸಿದ್ದರು.


ಬೆಟ್ಟಂಪಾಡಿ ಪಂಚಾಯತ್ ಸದಸ್ಯರಾದ ಸುಮಲತಾ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯಗುರು ವಿಜಯಕುಮಾರ್ ಮುಖ್ಯ ಅತಿಥಿಗಳಾಗಿ ಭಾಗಾವಹಿಸಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಊರ ಗಣ್ಯರುಗಳಾದ ಭವಾನಿ ಹುಕ್ರಪ್ಪ , ಹರೀಶ್ ಕುಮಾರ್ ,ನಿತ್ಯಾನಂದ ಗೌಡ ಬೈಲಾಡಿ, ತಾರನಾಥ.ಎನ್. ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಮಾಜಶಾಸ್ತ್ರ ಉಪನ್ಯಾಸಕ ಕಮಲಾಕ್ಷ ರವರು ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಪುಷ್ಪರಾಜ್ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ರಶ್ಮಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟವನ್ನು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ನಡೆಸಿಕೊಟ್ಟರು. ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಬಾಲ್‌ಬ್ಯಾಡ್ಮಿಂಟನ್ ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಟ್ಟಂಪಾಡಿ ಸರಕಾರಿ ಪಿಯು ಕಾಲೇಜು ಪುತ್ತೂರು ತಾಲೂಕಿನಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು.

LEAVE A REPLY

Please enter your comment!
Please enter your name here