ಅಕ್ರಮ ಮರಳು ಸಂಗ್ರಹ: ದೂರು

0

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ದಾಸ್ತಾನು ಇರಿಸಿರುವುದನ್ನು ಪತ್ತೆ ಹಚ್ಚಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯವರು ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಯನ್ನು ಉರುವಾಲು ಗ್ರಾಮದ ನಿವಾಸಿ ಸಂದೇಶ್ ಎಂದು ಗುರುತಿಸಲಾಗಿದ್ದು, ಆರೋಪಿಯು ಅಕ್ರಮವಾಗಿ ಸಂಗ್ರಹಿಸಿಟ್ಟ 33,600 ರೂ. ಮೌಲ್ಯದ 48 ಟನ್ ಮರಳನ್ನು ಮುಟ್ಟುಗೋಲು ಹಾಕಲಾಗಿದೆ.

LEAVE A REPLY

Please enter your comment!
Please enter your name here