ಸೆ.20: ಮುರ ಗೌಡ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

0

ಪುತ್ತೂರು: ಧರಿತ್ರಿ ಸೌಹಾರ್ದ ಸಹಕಾರಿ ಮುರ, ಕಬಕ, ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು, ಕಲ್ಲೇಗ ಗೌಡ ಯುವ ಸಂಘ ಮುರ – ಕಬಕ-ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮಂಗಳೂರು ಇದರ ನುರಿತ ತಜ್ಞ ವೈದ್ಯರುಗಳಿಂದ ಉಚಿತ ನೇತ್ರ ತಪಾಸಣಾ ಶಿಬಿರ ಸೆ.20ರಂದು ಮುರ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರು ರೋಟರ್‍ಯಾಕ್ಟ್ ಕ್ಲಬ್ ಅಧ್ಯಕ್ಷೆ ಜ್ಯೋತಿಕಾ, ಕಲ್ಲೇಗ ಗೌಡ ಯುವ ಸಂಘದ ಅಧ್ಯಕ್ಷ ಜಿನ್ನಪ್ಪ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಬಿರ ಬೆಳಿಗ್ಗೆ 9.3೦ರಿಂದ ಅಪರಾಹ್ನ 2 ಗಂಟೆಯವರೆಗೆ ನಡೆಯಲಿದ್ದು ಕಣ್ಣಿನ ಸಾಮಾನ್ಯ ಪರೀಕ್ಷೆ ಹಾಗೂ ಕಣ್ಣಿನ ಪೊರೆ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ, ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9611309794, 7349508621 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here