ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಕಾಣಿಯೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಶ್ರೀ ಕ್ಷೇತ್ರದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ನಾಲ್ಕಂಬ ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾದರು.


ಭಾಗೀರಥಿ ಮುರುಳ್ಯರವರು ಚುನಾವಣೆ ಮೊದಲು ಕ್ಷೇತ್ರಕ್ಕೆ ಆಗಮಿಸಿ ತಾನು ಚುನಾವಣೆಯಲ್ಲಿ ಗೆದ್ದು ಬಂದಲ್ಲಿ ಶ್ರೀ ಕ್ಷೇತ್ರದಲ್ಲಿ ಭಜನಾ ಸೇವೆಯನ್ನು ಮಾಡುವುದಾಗಿ ಪ್ರಾರ್ಥಿಸಿ ಕೊಂಡಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಶ್ರೀ ಕ್ಷೇತ್ರದಲ್ಲಿ ಭಜನೆ ಸೇವೆಯನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ನೆಮ್ಮಣ್ಣ ಗೌಡ ಅಂಬುಲ, ಶ್ರೀ ಉಳ್ಳಾಲ್ತಿ ಕ್ಷೇತ್ರದ ಭಜನಾ ಸಮಿತಿಯ ಜಯಂತ ಅಂಬುಲ, ಧರ್ಣಪ್ಪ ಅಂಬುಲ, ದಯಾನಂದ ಅಂಬುಲ, ಪ್ರಕಾಶ್ ಅರುವ, ಹರೀಶ ಅಂಬುಲ, ನೂತನ್ ಭಟ್, ವಸಂತ ನಡುಬೈಲು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here