ಪುತ್ತೂರು ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ಜನ್ಮ ದಿನಾಚರಣೆ – ರಾಮಕೃಷ್ಣ ಸೇವಾ ಸಮಾಜಕ್ಕೆ ಅಕ್ಕಿ, ದಿನಬಳಕೆ ವಸ್ತು ವಿತರಣೆ

0

ನರೇಂದ್ರ ಮೋದಿಯವರ ನಾಯಕತ್ವ ಮತ್ತೊಮ್ಮೆ ದೇಶಕ್ಕೆ ಬೇಕಾಗಿದೆ – ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ಜನ್ಮದಿವನ್ನು ದೇಶಕ್ಕೆ ಅವರು ನೀಡಿದ ಅಪಾರ ಕೊಡುಗೆಗಳನ್ನು ನೆನಪಿಸುವ ಮೂಲಕ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಸೇವಾ ಸಮಾಜಕ್ಕೆ ಅಕ್ಕಿ ಮತ್ತು ದಿನಬಳಕೆ ಆಹಾರ ಪದಾರ್ಥಗಳನ್ನು ಒದಗಿಸಿ, ಮಕ್ಕಳಿಗೆ ಸಿಹಿ ಹಂಚಲಾಯಿತು.

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಕಳೆದ ಒಂಬತ್ತೂವರೆ ವರ್ಷದಿಂದ ನಿರಂತರವಾಗಿ ರಜೆಯನ್ನು ಮಾಡದೆ ತನ್ನ ಕುಟುಂಬವನ್ನು ನೋಡದೆ ರಾಷ್ಟ್ರವೇ ನನ್ನ ಕುಟುಂಬವೆಂಬಂತೆ ವಸುದೈವಕುಟುಂಬಕಂ ವಿಚಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸ ಕಾರ್ಯ ಮೊನ್ನೆ ಮೊನ್ನೆ ಜಿ.20 ನಾಯಕತ್ವ ವಹಿಸುವ ಮೂಲಕ ಅವರ ದೂರದೃಷ್ಟಿಯೋಜನೆ, ಚಂದ್ರಯಾನಕ್ಕೆ ವಿಜ್ಞಾನಿಗಳು ಮಾಡಿದ ಸಾಧನೆ ಎಲ್ಲವು ಜಗತ್ತು ಭಾರತವನ್ನು ನೋಡುವ ಸಂದರ್ಭದಲ್ಲಿ ನರೇಂದ್ರ ಮೋದಿಯವರ ನಾಯಕತ್ವ ಮತ್ತೊಮ್ಮೆ ಈ ದೇಶಕ್ಕೆ ಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್, ಶ್ರೀ ರಾಮಕೃಷ್ಣ ಸೇವಾ ಸಮಾಜದ ಕಾರ್ಯದರ್ಶಿ ಗುಣಪಾಲ್ ಜೈನ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೊತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಯುವರಾಜ್ ಪೆರಿಯತ್ತೋಡಿ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಜಯಶ್ರೀ ಎಸ್ ಶೆಟ್ಟಿ, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ್ ಗೌಡ, ಪೂರ್ಣಿಮಾ, ಯಶೋದಾ ಹರೀಶ್, ಶ್ರೀಧರ್ ಗೌಡ ಕಣಜಾಲು, ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here