ಮಂಗಳೂರಿನ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ರಿಗೆ ಮುಂಭಡ್ತಿ

0

ಪುತ್ತೂರು: ಮಂಗಳೂರಿನ 3 ನೆ ಜೆ ಎಂ ಎಫ್ ಸಿ ನ್ಯಾಯಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ 2 ನೆ ಸಿ ಜೇ ಎಂ ನ್ಯಾಯಲಯದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕರಾಗಿ ಹಾಗೂ ಮಂಗಳೂರಿನ ಎಸ್ ಪಿ ಕಚೇರಿಯಲ್ಲಿ ಮತ್ತು ಪೋಲಿಸ್ ಆಯುಕ್ತರ ಕಚೇರಿಯಲ್ಲಿ ಕಾನೂನೂ ಅಧಿಕಾರಿ (ಕಿರಿಯ ) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್ ಕುಮಾರ್ ಅವರನ್ನು ಮಂಗಳೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ . ಟಿ.ಎಸ್.ಸಿ- 2 ಪೋಕ್ಸೋ ವಿಶೇಷ ನ್ಯಾಯಾಲಯದ ಸರಕಾರಿ ಅಭಿಯೋಜಕರಾಗಿ ಪದೋನ್ನತಿ ಗೊಳಿಸಿ ಸರಕಾರ ಆದೇಶಸಿದೆ.

ಹಿರಿಯ ಸಹಾಯಕ ಸರಕಾರಿ ಅಭಿಯೋಜಕರಾಗಿ ಇವರು ನಡೆಸಿದ ಹಲವಾರು ಪ್ರಕರಣ ಗಳಲ್ಲಿ ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ ಆರೋಪಿಗಳಿಗೆ ಜೈಲು ಶಿಕ್ಷೆ ಕೊಡಿಸುಲ್ಲಿ ಯಶಸ್ವೀಯಾಗಿದ್ದರು.ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಇಚಿಲಂಪಾಡಿ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here