ಕಾವು: ಪ್ರಧಾನಿ ಮೋದಿ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಪಂಚಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ

0

ಕಾವು: ಭಾರತೀಯ ಜನತಾ ಪಾರ್ಟಿ ಮಾಡ್ನೂರು ಶಕ್ತಿ ಕೇಂದ್ರದ ವತಿಯಿಂದ ದೇಶದ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿಯವರ 73ನೇ ಜನ್ಮ ದಿನದ ಪ್ರಯುಕ್ತ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅವರ ಆರೋಗ್ಯ ,ಆಯುಷ್ಯ ಹಾಗೂ ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಪಂಚಲಿಂಗೇಶ್ವರ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾರ್ಥನೆ ಸಲ್ಲಿಸಿದರು. ಅರ್ಚಕ ಪ್ರಕಾಶ್ ಬಳ್ಳಕ್ಕುರಾಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಮಾಡ್ನೂರು ಶಕ್ತಿ ಕೇಂದ್ರ ಸಂಚಾಲಕ ಲೋಕೇಶ್ ಚಾಕೋಟೆ, ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಲೋಹಿತ್ ಆಮ್ಚಿನಡ್ಕ, ತಾಲೂಕು ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು, ಪ್ರಮುಖರಾದ ನವೀನ್ ನನ್ಯ ಪಟ್ಟಾಜೆ, ಸಂಕಪ್ಪ ಪೂಜಾರಿ ಚಾಕೋಟೆ, ಯಜಿತ್ ಆಚಾರಿಮೂಲೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here