ಹೈದರಾಬಾದ್‌ನಲ್ಲಿ ನಡೆಯುವ ಕ್ರೀಡಾಕೂಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಆಯ್ಕೆ

0

ಪುತ್ತೂರು: ಮಂಡ್ಯದ ಕೆರೆಗೋಡು ಎಂಬಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಹ್ಯಾಮರ್ ತ್ರೋ ಮತ್ತು ಶಾಟ್‌ಪುಟ್ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಿಂಚನಾ ಬಿ. ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್‌ನಲ್ಲಿ ಹೈದರಾಬಾದ್ ನಲ್ಲಿ ನಡೆಯಲಿರುವ ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಇವರು ಬೆಟ್ಟಂಪಾಡಿಯ ಬೈಲಾಡಿ ನಿವಾಸಿಗಳಾದ ನಿತ್ಯಾನಂದ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕಿ ನಮಿತಾ ಕೆ.ಕೆ. ಇವರ ಪುತ್ರಿ.
ಈ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here