ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

0

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಸೆ.19ರಂದು ನಡೆಯಿತು.

ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಹಾಗೂ ಮೊಕ್ತೇಸರರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here