ಸವಣೂರಿನಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0


ಸವಣೂರು : ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಮದ 41ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವವು ಸೆ.19ರಂದು ಆರಂಭಗೊಂಡಿದ್ದು, ಸೆ.21ರವರೆಗೆ ಸವಣೂರಿನ ವಿನಾಯಕ ಸಭಾಭವನದಲ್ಲಿ ನಡೆಯಲಿದೆ.ಸೆ.19ರಂದು ಬೆಳಿಗ್ಗೆ ಉದಯ ಕುಮಾರ್‌ತಂತ್ರಿ ಸರ್ವೆ ಧ್ವಜಾರೋಹಣ ನೆರವೇರಿಸಿದರು. ಪುರೋಹಿತ ಅನಂತರಾಮ ಉಪಾದ್ಯಾಯರ ನೇತೃತ್ವದಲ್ಲಿ ಗಣೇಶ ಬಿಂಬ ಪ್ರತಿಷ್ಠಾಪನೆ ಹಾಗೂ 12 ತೆಂಗಿನ ಕಾಯಿಯ ಗಣಪತಿ ಹೋಮ ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಚಾಲನೆ ನೀಡಿದರು.

ಸವಣೂರು ಹಿ.ಪ್ರಾ.ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ,ಪಾರ್ವತಿ ಗಣೇಶ್‌ಭಟ್‌ ಹೊಸಮೂಲೆ ಅವರ ಶಿಷ್ಯೆಯರಿಂದ ಭಕ್ತಿಗೀತೆ ಕಾರ್ಯಕ್ರಮ ,ಶ್ರವಣ ರಂಗ ಪ್ರತಿಷ್ಠಾನ ಇವರಿಂದ ಭಕ್ತಿ ರಸಮಂಜರಿ, ಸಾಕ್ಷಾತ್‌ಶಿವ ಭಜನಾ ಮಂಡಳಿ ಚಾರ್ವಾಕ ಇವರಿಂದ ಕುಣಿತ ಭಜನೆ ನಡೆಯಿತು.

 
ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬಳಿಕ ಜಯಂತ್‌ವೈ ಮತ್ತು ಬಳಗದಿಂದ ಭಕ್ತಿ ರಸಮಂಜರಿ, ಶ್ರವಣರಂಗ ಪ್ರತಿಷ್ಠಾನ ಸವಣೂರು ಇವರಿಂದ ಯಕ್ಷಗಾನ ತಾಳಮದ್ದಳೆ ಚೂಡಾಮಣಿ ,ಸಂಜೆ  ಸವಣೂರು ಅಂಗನವಾಡಿ,ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಕು.ರಕ್ಷಾ ಸುಣ್ಣಾಜೆ ಅವರಿಂದ ಭರತನಾಟ್ಯ ನಡೆಯಿತು.ರಾತ್ರಿ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.


ಸೆ.20ರಂದು ಬೆಳಿಗ್ಗೆ ಉಷಾ ಪೂಜೆ,ಗಣಪತಿ ಹೋಮ,ಕುಮಾರಮಂಗಲ ಅರ್ಪಿತಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪುಣ್ಚಪ್ಪಾಡಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ,ಮಹಾಪೂಜೆ ನಡೆದು ಪ್ರಸಾದ ವಿತರಣೆ ,ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ  ಹರಿಭಜನಾ ಮಂಡಳಿ ದೇವಸ್ಯ, ಮುಗೇರು ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದು  ದೀಪಾರಾಧನೆ  ನಡೆಯಿತು. ಸವಣೂರು ಪ.ಪೂ.ಕಾಲೇಜು ಮತ್ತು ಪ್ರೌಢಶಾಲೆ ,ವೀರಮಂಗಲ ಹಿ.ಪ್ರಾ.ಶಾಲೆ ,ಕಾಳಿಕಾ ನೃತ್ಯಾಲಯ ಸವಣೂರು ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ,ಭರತ ನಾಟ್ಯ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ  ಗೌರವಾಧ್ಯಕ್ಷ ಕೆ,ಸೀತಾರಾಮ ರೈ ಸವಣೂರು, ಅಧ್ಯಕ್ಷ ಶಿವರಾಮ ಗೌಡ ಮೆದು, ಉಪಾಧ್ಯಕ್ಷ ರಾಘೌ ಗೌಡ ಸವಣೂರು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ ,ಜತೆ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ನಡುಬೈಲು,ಕೋಶಾಧಿಕಾರಿ ರಾಮಕೃಷ್ಣ ಪ್ರಭು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸೆ,21ರಂದು  ಧಾರ್ಮಿಕ ಸಭೆ
ಸೆ.21ರಂದು ಬೆಳಿಗ್ಗೆ ಉಷೆ ಪೂಜೆ,ಗಣಪತಿ ಹೋಮ,ಭಜನಾ ಕಾರ್ಯಕ್ರಮ ,ಕುಣಿತ ಭಜನೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಿವರಾಮ ಗೌಡ ಮೆದು ವಹಿಸುವರು.ಜೆ.ಇ.ಹೆಲ್ತ್‌ ಕೇರ್‌ ಸೀನಿಯರ್‌ ಪ್ರಾಜೆಕ್ಟ್‌ ಮ್ಯಾನೇಜರ್‌ ,ಸಕ್ಷಮ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಡಾ.ಹರಿಕೃಷ್ಣ ರೈ ಧಾರ್ಮಿಕ ಉಪನ್ಯಾಸ ನೀಡುವರು.ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಂಬಿಲ ಪಾಲ್ಗೊಳ್ಳುವರು.ಬಳಿಕ ಮಹಾಪೂಜೆ ನಡೆದು ,ಮಂಗಳಾರತಿ ,ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ನಡೆಯಲಿದೆ.ಸಂಜೆ 3 ಗಂಟೆಯಿಂದ ಶ್ರೀಗಣಪತಿ ವಿಗ್ರಹದ ಮೆರವಣಿಗೆ ನಡೆದು ಸರ್ವೆ ಗೌರಿ ಹೊಳೆಯಲ್ಲಿ ಜಲಸ್ತಂಬನ ನಡೆಯಲಿದೆ.

LEAVE A REPLY

Please enter your comment!
Please enter your name here