ಸವಣೂರು : ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಹಿಂ.ಜಾ.ವೇ.ಯಿಂದ ಸ್ಟೀಲ್ ಟೇಬಲ್ ಕೊಡುಗೆ

0

ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸ್ಟೀಲ್ ಟೇಬಲ್ ಅನ್ನು ಕೊಡುಗೆಯಾಗಿ ನೀಡಲಾಯಿತು.ದೇವಸ್ಥಾನದ ಆಡಳಿತ ಸಮಿತಿಯವರಿಗೆ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪುತ್ತೂರು ನಗರ ಘಟಕದ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು,ಸವಣೂರು ಘಟಕದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ, ಅಧ್ಯಕ್ಷ ಶ್ರೀಧರ ಇಡ್ಯಾಡಿ, ತಾಲೂಕು ಕಾರ್ಯದರ್ಶಿ ಪುಷ್ಪರಾಜ ಆರೇಲ್ತಡಿ, ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಪ್ರಕಾಶ್ ಕುದ್ಮನಮಜಲು,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶಿವಪ್ರಸಾದ್ ಶೆಟ್ಟಿ ಕಿನಾರ,ರಾಕೇಶ್ ರೈ ಕೆಡೆಂಜಿ,ಆಶಾ ಪ್ರವೀಣ್ ಕಂಪ ,ಅರ್ಚಕ ಪದ್ಮನಾಭ ಕುಂಜತ್ತಾಯ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here