ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

0

 ಪುತ್ತೂರು:  Insights on N-List and Swayam ಹಾಗೂ Art of Effective PPT Presentation ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರವು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.21ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಸಂತ ಆಗ್ನೆಸ್ ಕಾಲೇಜಿನ ಅಯ್ಕೆ ಶ್ರೇಣಿ ಗ್ರಂಥಪಾಲಕ ಡಾ. ವಿಶಾಲ ಬಿ. ಕೆ ಹಾಗೂ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಗೀತಾ ಪಿಂಟೋ ಕಾರ್ಯಾಗಾರವನ್ನು ನಡೆಸಿದರು.ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕ ಡಾ. ಕಾಂತೇಶ್ ಎಸ್ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿಯವರು ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಹಾಗೂ ಕಾಲೇಜಿನ ಅಯ್ಕೆ ಶ್ರೇಣಿ ಗ್ರಂಥಪಾಲಕ ರಾಮ ಕೆ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಅನನ್ಯ ಎಸ್, ವಿದ್ಯಾಶ್ರೀ, ರಕ್ಷಿತ, ನವ್ಯ ಶ್ರೀ, ದೀಕ್ಷಿತಾ ಪ್ರಾರ್ಥಿಸಿದರು.ಕಾರ್ಯಾಗಾರದಲ್ಲಿ ಕಾಲೇಜಿನ ಉಪನ್ಯಾಸಕರು, ಪ್ರಥಮ, ದ್ವಿತೀಯ  ಬಿ. ಎಸ್ಸಿ ಹಾಗೂ ಎಲ್ಲಾ ಅಂತಿಮ ಪದವಿ ವಿದ್ಯಾರ್ಥಿಗಳು ಭಾಗವಹಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ. ಗಾಯತ್ರಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here