ನಾಣಿಲ ಶಾಲೆಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ರೇಣುಕಾಪ್ರಸಾದ್ ಕೆ.ವಿರವರಿಂದ ಲ್ಯಾಪ್ ಟಾಪ್ ಕೊಡುಗೆ

0

ಕಾಣಿಯೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ರೇಣುಕಾಪ್ರಸಾದ್ ಕೆ.ವಿ ಅವರು
ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್ ಟಾಪ್ ನ್ನು ಕೊಡುಗೆಯನ್ನು ನೀಡಿದರು. ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ನಾಣಿಲ ಇವರಿಂದ ನೂರು ಸ್ಟೀಲ್ ಲೋಟವನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ದೈಪಿಲ ಕ್ಷೇತ್ರದ ಸೇವಾಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಗೌಡ ಅರುವಗುತ್ತು ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ನ್ಯಾಯವಾದಿ ವೆಂಕಪ್ಪಗೌಡ ಮಾಚಿಲ, ನಾಣಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ವಿಜಯಕುಮಾರ್ ಸೊರಕೆ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ಅಂಬುಲ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಸಂತ ದಲಾರಿ, ಮುಖ್ಯಗುರು ಪದ್ಮಯ್ಯ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here