ಬಾಲವನ ಕಾರಂತ ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ

0

ಪುತ್ತೂರು: ಪರ್ಲಡ್ಕದ ಬಾಲವನದಲ್ಲಿ ಅ.10ರಂದು ನಡೆಯುವ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ ಸಂದರ್ಭದಲ್ಲಿ ಪ್ರತಿ ವರ್ಷ ನೀಡಲಾಗುವ ಕಾರಂತ ಪ್ರಶಸ್ತಿಗೆ ಆಯ್ಕೆ ಕುರಿತು 5 ಜನರ ಸಮಿತಿ ಆಯ್ಕೆಗೊಂಡಿದೆ.


ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸಮಿತಿ ಅಧ್ಯಕ್ಷರಾಗಿದ್ದು, ಸಹಾಯಕ ಆಯುಕ್ತ ಗಿರೀಶ್‌ನಂದನ್ ಎಂ ಅವರು ಪದನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ. ಸದಸ್ಯರಾಗಿ ಬಿಳಿಯೂರುಕಟ್ಟೆ ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಕಲ್ಲಾರೆ ನಿವಾಸಿ ನ್ಯಾಯವಾದಿ ಬೆಟ್ಟ ಈಶ್ವರ ಭಟ್, ದರ್ಬೆ ನಿವಾಸಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಆಯ್ಕೆಗೊಂಡಿದ್ದಾರೆ. ಈ ಸಮಿತಿಯಲ್ಲಿರುವ ಸದಸ್ಯರುಗಳು ಈ ವರ್ಷದ ಪ್ರಶಸ್ತಿಗಾಗಿ ಪ್ರಶಸ್ತಿ ನಿಯಮಕ್ಕೆ ಅನುಗುಣವಾಗಿ ಕ್ಷೇತ್ರದಿಂದ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಿ, ಅದರ ಪೂರ್ಣ ಮಾಹಿತಿಯೊಂದಿಗೆ ಸೂಕ್ತ ಶಿಫಾರಸ್ಸು ಮಾಡಿ ಸೆ.26ರ ಒಳಗೆ ಸಮಿತಿಗೆ ಮಂಡಿಸಲಿದ್ದಾರೆ.

LEAVE A REPLY

Please enter your comment!
Please enter your name here