ಕಾವಲಕಟ್ಟೆ: ಹಿದಾಯ ಪುನರ್ವಸತಿ ಕಾಲೊನಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

0

ಕಾವಲಕಟ್ಟೆ: ಹಿದಾಯ ಫೌಂಡೇಷನ್ ಮಂಗಳೂರು ಇದರ ಅಧೀನದಲ್ಲಿ ಕಾವಲಕಟ್ಟೆಯಲ್ಲಿ ಕಾರ‍್ಯಾಚರಿಸುತ್ತಿರುವ ಹಿದಾಯ ಪುನರ್ವಸತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.


ಪುನರ್ವಸತಿ ಕೇಂದ್ರ ಮತ್ತು ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಾರ‍್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಅವರು ಇದರ ಕಾರ‍್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸರ್ಕಾರದಿಂದ ದೊರಕುವ ಸವಲತ್ತು ನೀಡುವ ನಿಟ್ಟಿನಲ್ಲಿ ತನ್ನಿಂದ ಆಗಬೇಕಾದ ಪೂರಕ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಸಚಿವರ ಜೊತೆಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಎ.ಸಿ. ವಿನಯರಾಜ್ ಇದ್ದರು.
ಹಿದಾಯ ಫೌಂಡೇಶನ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಪುನರ್ವಸತಿ ಕೇಂದ್ರದ ಕಾರ‍್ಯಚಟುವಟಿಕೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಪ್ರಧಾನ ಕಾರ‍್ಯದರ್ಶಿ ಆಬಿದ್ ಅಸ್ಗರ್, ಪದಾಧಿಕಾರಿಗಳಾದ ಹಕೀಂ ಕಲಾಯಿ, ಆಸಿಫ್ ಇಕ್ಬಾಲ್, ಬಿ.ಎಂ. ತುಂಬೆ ಇದ್ದರು.

LEAVE A REPLY

Please enter your comment!
Please enter your name here