ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಜ್ಞಾಪನಾ‌ ಪತ್ರ ಬಿಡುಗಡೆ-2024 ಮಾ.20ರಿಂದ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ‌ ದೇವಸ್ಥಾನದಲ್ಲಿ ೨೦೨೪ ಮಾ.೨೦ರಿಂದ ನಡೆಯಲಿರುವ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ, ಶ್ರೀದೇವರ ನೂತನ ಧ್ವಜಸ್ತಂಭ ಪ್ರತಿಷ್ಠೆ, ನೂತನ ಬ್ರಹ್ಮರಥ ಸಮರ್ಪಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವಿಜ್ಞಾಪನಾ‌ ಪತ್ರವನ್ನು ಬಿಡುಗಡೆ ಮಾಡಲಾಯಿತು.


ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ವೇದವ್ಯಾಸ ರಾಮಕುಂಜರವರು ವಿಜ್ಞಾಪನಾ ಪತ್ರವನ್ನು ಬಿಡುಗಡೆಮಾಡಿ ಶುಭಹಾರೈಸಿದರು.
ಕ್ಷೇತ್ರದ ಪವಿತ್ರಪಾಣಿ ಡಾ.ಕೆ.ವೈ.ಹೇಮಂತ ಮೂರ್ತಿ, ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯ, ವ್ತವಸ್ಥಾಪನಾ ಸಮಿತಿ ಸದಸ್ಯರಾದ ಗಿರಿಧರ ಗೋಮುಖ, ಸುಧೀರ್ ಪ್ರಸಾದ್ ಆನಾಜೆ, ಸುದರ್ಶಣ್ ವೈಲಾಯ, ಚಂದ್ರಶೇಖರ ಕುದ್ಮಾನು, ಲೀಲಾವತಿ ಹಿರ್ಕುಡೆಲು, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮಜೋಯಿಸ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋಹರ ನಾಯ್ಕ್, ಬ್ರಹ್ಮಕಲಶ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ ಎರ್ಕಡಿತ್ತಾಯ ಸೇರಿದಂತೆ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತಿತರಿದ್ದರು.ಆರಂಭದಲ್ಲಿ ದೇವಸ್ಥಾನದಲ್ಲಿ ಅರ್ಚಕರಾದ ಮುರಳೀಧರ ಬಡೆಕ್ಕಿಲ್ಲಾಯರವರು ಪ್ರಾರ್ಥನೆ ನೆರವೇರಿಸಿದರು.

LEAVE A REPLY

Please enter your comment!
Please enter your name here