ಸುದಾನ ಶಾಲೆಯ ಗಗನ್ ಎ ಜಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0


ಪುತ್ತೂರು: ದ.ಕ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಆಯೋಜಿತವಾದ ದ.ಕ ಜ್ಯೂನಿಯರ್ ಅಥ್ಲೆಟಿಕ್ ಮೀಟ್ 2023ರ ಕ್ರೀಡಾ ಕೂಟವು ಸಪ್ಟೆಂಬರ್ 8 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಇದರಲ್ಲಿ ಸುದಾನ ವಸತಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಗಗನ್ ಎ ಜಿ (ಗಣೇಶ್ ಎ ಸಿ ಮತ್ತು ಗೀತಾ ಅವರ ಮಗ) 60ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀ ಚಂದ್ರಶೇಖರ್ ಮತ್ತು ಶ್ರೀ ನಿಧಿ ಆರ್ಯಾಪು ಇವರಿಂದ ವಿಶೇಷ ತರಬೇತಿಯನ್ನು ಪಡೆದಿದ್ದು ಶಾಲೆಯ ದೈಹಿಕ ಶಿಕ್ಷಕರಾದ ಪುಷ್ಪರಾಜ್ ಮತ್ತು ನವೀನ್ ಮಾರ್ಗದರ್ಶನ ಮಾಡಿದ್ದಾರೆ. ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್ ಮತ್ತು ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಅಭಿನಂದನೆಗಳೊಂದಿಗೆ ಮುಂದಿನ ಸ್ಪರ್ಧೆಗೆ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here