ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದಿಂದ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗೌರವಾರ್ಪಣೆ

0

ಕಾಣಿಯೂರು: 2022-23ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ರಸಗೊಬ್ಬರ ಮತ್ತು ಕ್ರಿಮಿನಾಶಕ ಖರೀದಿಸಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ರಾದ ಕೆ.ವಿ ಪ್ರಸಾದ್ ರವರು ಚಾರ್ವಾಕ ಸಹಕಾರ ಸಂಘದ ಅಧ್ಯಕ್ಷರಾದ ಆನಂದ ಗೌಡ ಮೇಲ್ಮನೆ ಹಾಗೂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅಶೋಕ ಗೌಡ ರವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಚಾರ್ವಾಕ ಸಹಕಾರ ಸಂಘದ ಉಪಾಧ್ಯಕ್ಷರಾದ ಮುರಳೀಧರ ಪುಣ್ಚತ್ತಾರು ,ಉಪ್ಪಿನಂಗಡಿ ಸಹಕಾರ ಸಂಘದ ಉಪಾಧ್ಯಕ್ಷ ರಾದ ಸುನೀಲ್ ದಡ್ಡು, ನಿರ್ದೇಶಕರಾದ ರಾಜೇಶ್ ಶಾಂತಿನಗರ,ರಾಮ ನಾಯ್ಕ್ ಸಚಿನ್, ಯತೀಶ್ ಶೆಟ್ಟಿ,ದಯಾನಂದ ಗೌಡ,ಸುಜಾತ ಆರ್ ರೈ, ಶ್ಯಾಮಲಾ ಶೆಣೈ, ಕುಂಞ.ಯನ್ ಜಗದೀಶ್ ರಾವ್, ಸಂಘದ ಸಿ ಇ ಓ ಕ್ಲೇರಿ ವೇಗಸ್ ಹಾಗೂ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ವಲಯ ಮೇಲ್ವಿಚಾರಕ ಶರತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here