ಸವಣೂರು : ಬೈಕ್‌ಗೆ ರಿಕ್ಷಾ ಡಿಕ್ಕಿ, ಇಬ್ಬರಿಗೆ ಗಾಯ

0

ಸವಣೂರು: ಬೈಕ್‌ಗೆ ರಿಕ್ಷಾ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಸವಣೂರಿನಲ್ಲಿ ನಡೆದಿದ್ದು, ರಿಕ್ಷಾ ಚಾಲಕನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ  ನಿವಾಸಿಯಾದ ರಂಜಿತ್ ಜಿ ವಿ ನೀಡಿದ ದೂರಿನಂತೆ ,  ರಂಜಿತ್ ಅವರು ಯತೀಶ್ ಎಂಬವರೊಂದಿಗೆ ಬೈಕ್‌ನಲ್ಲಿ  ಸವಣೂರು ಜನತಾ ಬಜಾರ್ ಬಳಿ ತೆರಳುತ್ತಿದ್ದಾಗ, ಮೋನಪ್ಪ ಎಂಬವರು ರಿಕ್ಷಾವನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬೈಕ್‌ಗೆ ಡಿಕ್ಕಿಯಾಗಿದೆ.  ಡಿಕ್ಕಿಯಾದ ಪರಿಣಾಮ ಬೈಕ್ ಸವಾರಿಬ್ಬರೂ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಬೆಳ್ಳಾರೆ  ಪೊಲೀಸ್ ಠಾಣೆಯಲ್ಲಿ ಅ.ಕ್ರ 65/2023 ಕಲಂ 279, 338, ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here