ಸೆ.26: ಬನ್ನೂರು ಸಂತ ಅಂತೋನಿ ಚರ್ಚ್ ಗೆ ಶಾಸಕ ಅಶೋಕ್ ರೈ ಭೇಟಿ – ಸನ್ಮಾನ

0

ಪುತ್ತೂರು: ಬನ್ನೂರು ಸಂತ ಅಂತೋನಿ ಚರ್ಚ್ ಗೆ ಸೆ.26 ರಂದು ಸಂಜೆ ಶಾಸಕ ಅಶೋಕ್ ಕುಮಾರ್ ರೈಯವರು ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರನ್ನು ಬನ್ನೂರು ಚರ್ಚ್ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ಜರಗಲಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಎಂ.ಬಿ, ಸಾಮಾಜಿಕ ಧುರೀಣ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜ ಸಹಿತ ಹಲವರು ಗಣ್ಯರು ಉಪಸ್ಥಿತಲಿದ್ದಾರೆ. ಬನ್ನೂರು ಚರ್ಚ್ ಧರ್ಮಗುರು ಬಾಲ್ತಜಾರ್ ಪಿಂಟೋರವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here