ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ‌.ಸಿ.ಟ್ರಸ್ಟ್ ನಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ‌.ಸಿ.ಟ್ರಸ್ಟ್, ಜನ ಜಾಗೃತಿ ವೇದಿಕೆ ಪುತ್ತೂರು ವಲಯ ಹಾಗೂ ಪ್ರಗತಿಬಂಧು , ಸ್ವ ಸಹಾಯ ಸಂಘಗಳ ಒಕ್ಕೂಟ ಪುತ್ತೂರು ವಲಯದ ವತಿಯಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ವಹಿಸಿದ್ದರು. ಪುತ್ತೂರು ತಾಲೂಕು ಜನ ಜಾಗೃತಿಯ ಅಧ್ಯಕ್ಷ ಲೋಕೇಶ್ ಹೆಗ್ಡೆ ದೀಪ ಪ್ರಜ್ವಲಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲೆ ಹರಿಣಾಕ್ಷಿ ಜೆ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪುತ್ತೂರು ವಲಯದ ಜನ ಜಾಗೃತಿ ಅಧ್ಯಕ್ಷ ಸತೀಶ್ ನ್ಯಾಕ್ ಹಾಗೂ ಪುತ್ತೂರು ವಲಯದ ಮೇಲ್ವಿಚಾರಕಿ ಶೃತಿ ಉಪಸ್ಥಿತರಿದ್ದರು. ಶಿಜಾ ಮತ್ತು ಶಿಲ್ಪಾ ಪ್ರಾರ್ಥಿಸಿದರು.ಸ್ಥಿತಿಕಾ ಸ್ವಾಗತಿಸಿದರು. ಚಿಂತನಾ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿ ನಿಧಿ ಪುಷ್ಪಲತಾ ವಂದಿಸಿದರು.

LEAVE A REPLY

Please enter your comment!
Please enter your name here