ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24ರಂದು ವಿಜೃಂಭಣೆಯಿಂದ ನಡೆಯಲಿರುವ ಶಾರದೋತ್ಸವದ ಆಮಂತ್ರಣ ಪತ್ರಿಕೆಯು ಸೆ.24ರಂದು ಬಿಡುಗಡೆಗೊಂಡಿತು.
ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಸನತ್ ಕುಮಾರ್ ರೈ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಗಣೇಶ್ ಭಟ್, ದೇವಪ್ಪ ನಾಯ್ಕ ಉಪ್ಪಳಿಗೆ, ಧನ್ಯರಾಜ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಿಠಲ ರೈ ಬೈಲಾಡಿ, ಶಾರದೋತ್ಸವ ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬೈಲಾಡಿ, ಕಾರ್ಯದರ್ಶಿ ಶೀನಪ್ಪ ಬದಂತಡ್ಕ, ಶುಭಕರ ರೈ ಬೈಲಾಡಿ, ದಿನೇಶ್ ರೈ ಬಾಳೆಹಿತ್ಲು, ಹರಿಪ್ರಕಾಶ್ ಬೈಲಾಡಿ ಬೀಡು, ಹರೀಶ್ ಉಪ್ಪಳಿಗೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here