ಸೇಡಿಯಾಪಿನಲ್ಲಿ ಕಾರು, ರಿಕ್ಷಾ ಡಿಕ್ಕಿ – ರಿಕ್ಷಾ ಚಾಲಕ ಸಹಿತ ಮೂವರಿಗೆ ಗಾಯ

0

ಪುತ್ತೂರು: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.25ರಂದು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಸೇಡಿಯಾಪಿನಲ್ಲಿ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡಿದ್ದಾರೆ.
ಬನ್ನೂರು ಗ್ರಾಮದ ರಾಧಾಕೃಷ್ಣ ಸಪಲ್ಯ ಅವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಉಮೇಶ್ ಎಂಬವರು ಚಲಾಯಿಸುತ್ತಿದ್ದ ಕಾರು ನಡುವೆ ಕೋಡಿಂಬಾಡಿ ಗ್ರಾಮದ ಸೇಡಿಯಾಪಿನಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾದ ಚಾಲಕ ರಾಧಾಕೃಷ್ಣ ಸಪಲ್ಯ, ಪ್ರಯಾಣಿಕರಾದ ಬಾಬು ನಾಯ್ಕ ಮತ್ತು ಶ್ವೇತಾ ಎಂಬವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here