ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ತಾ| ಮಟ್ಟದ ವಿಜ್ಞಾನ ವಿಚಾರಗೋಷ್ಠಿ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ ಆಯೋಜಿಸಲಾಯಿತು. ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕಿ ಅಮೃತಾಕಲಾ ಹಾಗೂ ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗಿಸಿ ಕಾರ‍್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಅಮೃತಾಕಲಾ ಮಾತನಾಡಿ ಸಿರಿ ಧಾನ್ಯಗಳ ಮಹತ್ವವನ್ನು ತಿಳಿಸಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಪ್ರಶಾಂತ್ ಭಟ್ ಮತ್ತು ಪಾಪೆಮಜಲು ಪ್ರೌಢಶಾಲೆಯ ಸಹ ಶಿಕ್ಷಕ ಹರಿಪ್ರಸಾದ್ ಕೆ. ತೀರ್ಪುಗಾರರಾಗಿ ಸಹಕರಿಸಿದರು.

ಸ್ಪರ್ಧೆಯ ನಂತರ ಸಮಾರೋಪ ಕಾರ್ಯಕ್ರಮ ಜರುಗಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೋ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ವಿಜ್ಞಾನ ಶಿಕ್ಷಕಿ ರೂಪಾ ಡಿ. ಕೋಸ್ಟ, ಲೆನಿಟಾ ಮೊರಾಸ್, ಹರಿಣಾಕ್ಷಿ, ಜೋಯ್ಲಿನ್ ರೊಡ್ರಿಗಸ್, ಸುನಿತಾ ಪಿಂಟೊ, ಭಾವನಾ ಸುಧೀರ್ ಸಹಕರಿಸಿದರು. ಇನಾಸ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರ್ವಹಿಸಿದರು.

ಸ್ಪರ್ಧೆಯಲ್ಲಿ ಒಟ್ಟು 22 ಶಾಲೆಗಳು ಭಾಗವಹಿಸಿದ್ದವು. ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಫಾತಿಮತ್ ಫಿಝಾ ಪ್ರಥಮ, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಪಿತಾ ಎ ದ್ವಿತೀಯ ಹಾಗೂ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಲಕ್ಷ್ಯಾ ತೃತೀಯ ಸ್ಥಾನ ಗಳಿಸಿದರು.

LEAVE A REPLY

Please enter your comment!
Please enter your name here