ಶಾಂತಿನಗರ: ಗಣೇಶ ಚೌತಿ ಪ್ರಯುಕ್ತ ಆಟೋಟ ಸ್ಪರ್ಧೆ

0

ನೆಲ್ಯಾಡಿ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಶಾಂತಿನಗರ ಇದರ ಸಹಕಾರದೊಂದಿಗೆ ಆದರ್ಶ ಯುವಕ ಮಂಡಲ ಶಾಂತಿನಗರ ಇದರ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಗಣೇಶ ಚೌತಿ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಸೆ.24ರಂದು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.


ನಿವೃತ್ತ ತಹಶೀಲ್ದಾರ್ ಕೃಷ್ಣಪ್ಪ ಪೂಜಾರಿಯವರು ಉದ್ಘಾಟಿಸಿದರು. ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷ ಪವನ್ ಕುಮಾರ್ ರೈ ಕುದುಮಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯೆ ಹೇಮಲತಾ ಮುರಿಯೇಲು, ಪ್ರಗತಿ ಪರ ಕೃಷಿಕ ರವೀಂದ್ರ ಭಟ್ ಕಾಂಚನ, ಶಾಂತಿನಗರ ಶಾಲಾ ಸಹಶಿಕ್ಷಕ ಮಂಜುನಾಥ ಮಣಕವಾಡ, ಆದರ್ಶ ಯುವಕ ಮಂಡಲದ ಉಪಾಧ್ಯಕ್ಷ ಜಗದೀಶ ಅರ್ತಿಗುಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ತೇಜಸ್ ಶಾಂತಿನಗರ ವಹಿಸಿದ್ದರು. ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಗೌರವಾಧ್ಯಕ್ಷ ಪ್ರತಾಪ್‌ಚಂದ್ರ ರೈ ಕುದುಮಾರುಗುತ್ತು, ಆದರ್ಶ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಆನಂದ ಕೆ.ಎಸ್., ಶಾಂತಿನಗರ ಶಾಲಾ ಮುಖ್ಯೋಪಾಧ್ಯಾಯ ಪ್ರದೀಪ್ ಬಾಕಿಲ, ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಬಾಲಕೃಷ್ಣ ಅಲೆಕ್ಕಿ, ಆಳ್ವಾಸ್ ಕಾಲೇಜಿನ ಉಪನ್ಯಾಸಕ ಅಜಿತ್ ಕುಮಾರ್ ಪಾಲೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಕಾರ್ಯದರ್ಶಿ ಪ್ರಜ್ವಲ್ ಬಿ.ಜೆ. ಸ್ವಾಗತಿಸಿ, ಕುಶಾಲಪ್ಪ ಎನ್.ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಳದ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here