ನೆಲ್ಯಾಡಿ: ಜನಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ

0

ನೆಲ್ಯಾಡಿ: ಸುಳ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶದ ಪೂರ್ವಭಾವಿ ಸಭೆ ನೆಲ್ಯಾಡಿ ಹೊಸಮಜಲು ಮುಂದುವರಿಕಾ ಕೇಂದ್ರದಲ್ಲಿ ನಡೆಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ಒಕ್ಕೂಟದ ನೆಲ್ಯಾಡಿ ವಲಯ ಅಧ್ಯಕ್ಷ ಕುಶಾಲಪ್ಪ ಗೌಡ, ನೆಲ್ಯಾಡಿ ವಲಯದ ಮೇಲ್ವಿಚಾರಕ ವಿಜೇಶ್ ಜೈನ್, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಹಾರ್ಪಳರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ವಲಯದ ಒಕ್ಕೂಟಗಳ ಅಧ್ಯಕ್ಷರು, ಜನಜಾಗೃತಿ ವೇದಿಕೆ ಸದಸ್ಯರು ವಲಯದ ಜ್ಞಾನ ವಿಕಾಸ ಕೇಂದ್ರಗಳ ಸಂಯೋಜಕಿಯವರು, ವಲಯದ ಸೇವಾಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here