ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಭಾರತೀ ನಗರ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಲ್ಲಿ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ “ಮಾಯಾಮೃಗ” ಎಂಬ ತಾಳಮದ್ದಳೆ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ್ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ, ಮಾ.ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಪಕಳಕುಂಜ ಶ್ಯಾಮ್ ಭಟ್ (ರಾವಣ), ಗುಡ್ಡಪ್ಪ ಬಲ್ಯ (ಸನ್ಯಾಸಿ ರಾವಣ), ಭಾಸ್ಕರ ಬಾರ್ಯ (ಶ್ರೀ ರಾಮ), ದುಗ್ಗಪ್ಪ ನಡುಗಲ್ಲು(ಸೀತೆ), ಮಾಂಬಾಡಿ ವೇಣುಗೋಪಾಲ್ ಭಟ್ (ಲಕ್ಷ್ಮಣ), ಬಡೆಕ್ಕಿಲ ಚಂದ್ರಶೇಖರ ಭಟ್ (ಮಾರೀಚ) ಸಹಕರಿಸಿದರು. ದೇವಳದ ಸಂಚಾಲಕರು ಹಾಗೂ ಸದಸ್ಯರು ಸಹಕರಿಸಿದರು. ಇಂಜಿನಿಯರ್ ಶಂಕರ್ ಭಟ್ ಪ್ರಾಯೋಜಿಸಿದರು.

LEAVE A REPLY

Please enter your comment!
Please enter your name here