ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ,ಯಾವ ಸಮಯದಲ್ಲೂ ಮಿನಿಸ್ಟ್ರು, ಡಿ.ಸಿ ಭೇಟಿ ನೀಡಬಹುದು -ತಾ.ಪಂ ಸಾಮಾನ್ಯ ಸಭೆಯಲ್ಲಿ ಆಡಳಿತಾಧಿಕಾರಿಯಿಂದ ಸೂಚನೆ

0

ಪುತ್ತೂರು: ಸರಕಾರಿ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ. ಮೆನು ಪ್ರಕಾರ ಫುಡ್ ಇರಬೇಕು. ಶೌಚಾಲಯ, ಅಡುಗೆ ಕೋಣೆ ಶುಚಿಯಾಗಿರಿಸಬೇಕು. ಯಾವುದೇ ಸಮಯದಲ್ಲಿ ಸಚಿವರುಗಳು, ಜಿಲ್ಲಾಧಿಕಾರಿಗಳು ಬರಬಹುದು ಎಂದು ತಾ.ಪಂ ಆಡಳಿತಾಧಿಕಾರಿ ಸಂಧ್ಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಪುತ್ತೂರು ತಾ.ಪಂ ಕಿರು ಸಭಾಂಗಣದಲ್ಲಿ ಸೆ.27ರಂದು ನಡೆದ ತಾ.ಪಂ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಮಂಗಳೂರು ವಸತಿ ನಿಲಯಕ್ಕೆ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಪರಿಶೀಲನೆ ಮಾಡಿದ್ದಾರೆ. ಪುತ್ತೂರಿನಲ್ಲೂ ಅವರು ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ. ಹಾಗಾಗಿ ವಸತಿ ನಿಲಯಗಳು ಗಲೀಜಾಗಿರಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ತಾ.ಪಂ ಯೋಜನಾಧಿಕಾರಿ ಸುಕನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here