ಪುತ್ತೂರಿನಲ್ಲಿ ಹಿಂದೂ ಶೌರ್ಯ ಸಂಗಮ – ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ವತಿಯಿಂದ ರಾಜ್ಯಾದ್ಯಾಂತ ನಡೆಯುತ್ತಿರುವ ಶೌರ್ಯ ಜಾಗರಣ ರಥಯಾತ್ರೆಯ ಅಂಗವಾಗಿ ದಿನಾಂಕ ಅ.7ರಂದು ಪುತ್ತೂರಿನಲ್ಲಿ ನಡೆಯಲಿರುವ ’ಬೃಹತ್ ಹಿಂದೂ ಶೌರ್ಯ ಸಂಗಮ’ ಇದರ ಅಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೆ.27ರಂದು ಪಂಚವಟಿ ಕಾರ್ಯಾಲಯದಲ್ಲಿ ಮಾಡಲಾಯಿತು.


ಅ.7ರಂದು ನಡೆಯುವ ಶೌರ್ಯ ಜಾಗರಣ ರಥಯಾತ್ರೆಯು ಸಂಜೆ ಗಂಟೆ 4.30ಕ್ಕೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಶೋಭಯಾತ್ರೆ ಹೊರಡಲಿದೆ. ಕಿಲ್ಲೆ ಮೈದಾನನದಲ್ಲಿ ಸಮಾವೇಶಗೊಂಡು ಅಲ್ಲಿ ಬೃಹತ್ ಸಾರ್ವಜನಿಕ ಸಭೆ ಹಿಂದು ಶೌರ್ಯ ಸಂಗಮ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಹರೀಶ್ ದೋಳ್ಪಾಡಿ, ಬಿಜೆಪಿ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಮಹಾಶಕ್ತಿ ಕೇಂದ್ರದ ನಾಗೇಶ್ ಟಿ.ಎಸ್, ಶರಾವತಿ, ಶೇಷಪ್ಪ ಬೆಳ್ಳಿಪ್ಪಾಡಿ, ಕೃಷ್ಣಪ್ರಸಾದ್ ಬೆಟ್ಟ, ಸತೀಶ್ ಬಿ.ಎಸ್ ಸಹಿತ ಹಲವಾರು ಮಂದಿ ಉಪಸ್ಥತರಿದ್ದರು.

LEAVE A REPLY

Please enter your comment!
Please enter your name here