ಉತ್ತಮ ಶಿಕ್ಷಕ ಪ್ರಶಸ್ತಿಗೆ ಚಾರ್ವಾಕದ ಶಿವಪ್ರಸಾದ್ ಬಾರೆಂಗಳ ಆಯ್ಕೆ

0

ಕಾಣಿಯೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಪ್ರಣವ ಎಜುಕೇಶನ್ ಫೌಂಡೇಶನ್ ಬೆಂಗಳೂರು ಇವರು ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ಚಾರ್ವಾಕ ಗ್ರಾಮದ ಶಿವಪ್ರಸಾದ್ ಬಾರೆಂಗಳ ಇವರು ಆಯ್ಕೆಯಾಗಿದ್ದಾರೆ. ಶಾಲೆಯಲ್ಲಿ ವಿಭಿನ್ನ ಶೈಕ್ಷಣಿಕ ಚಟುವಟಿಕೆ ಕೈಗೊಂಡು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಇವರಿಗೆ ಶಾಸಕರು ಕೊಡುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಾಸಕರಾದ ಭಾಗೀರಥಿ ಮುರುಳ್ಯ ಅವರು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ 20 ಶಿಕ್ಷಕರು ಆಯ್ಕೆಯಾಗಿದ್ದು, ಸೆ 30ರಂದು ಸುಳ್ಯ ತಾಲೂಕು ಪಂಚಾಯತ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸನ್ಮಾನ ಸಮಾರಂಭ ನಡೆಯಲಿದೆ.

LEAVE A REPLY

Please enter your comment!
Please enter your name here