ಅ.4: ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ

0

ನೆಲ್ಯಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ಸಮಾಜ ಕಾರ್ಯ ವಿಭಾಗ ಹಾಗೂ ಗ್ರಾಮ ಪಂಚಾಯತ್ ನೆಲ್ಯಾಡಿ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಅ.4ರಂದು ನೆಲ್ಯಾಡಿ ಎಲೈಟ್ ಹಾಲ್‌ನಲ್ಲಿ ನಡೆಯಲಿದೆ.


ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಶಿಬಿರ ಉದ್ಘಾಟಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ್ಪಿನಂಗಡಿ ಗಿರಿಜ ಕ್ಲಿನಿಕ್‌ನ ದಂತ ವೈದ್ಯ ಡಾ.ರಾಜರಾಮ್ ಕೆ.ಬಿ., ಮಂಗಳೂರು ಲೇಡಿಗೋಶನ್ ಆಸ್ಪತ್ರೆಯ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಜಿಲ್ಲಾ ಸಂಯೋಜಕ ಪ್ರವೀಣ್‌ಕುಮಾರ್ ಸೇರಿದಂತೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗ್ರಾಮ ಪಂಚಾಯತ್ ನೆಲ್ಯಾಡಿ, ಜೇಸಿಐ ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ-ಹಾರ್ಪಳ, ವಿಷ್ಣುಮೂರ್ತಿ ಗೆಳೆಯರ ಬಳಗ ಪಡುಬೆಟ್ಟು, ವರ್ತಕರ ಸಂಘ ನೆಲ್ಯಾಡಿ, ಅಲ್ ಇಖ್ವಾನ್ ಕಮಿಟಿ ಪಡುಬೆಟ್ಟು ಇವರು ಶಿಬಿರಕ್ಕೆ ಸಹಕಾರ ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here