ಸುಳ್ಯದಲ್ಲಿ ರಾಷ್ಟ್ರೀಯ ಪ್ರೊ ಕಬಡ್ಡಿ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸಂಘಟಕರಿಂದ ಆಹ್ವಾನ

0

ಪುತ್ತೂರು: ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ, ಆಮೆ ಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಸಂಘಟನಾ ಸಮಿತಿ ರಾಷ್ಟ್ರೀಯ ಪ್ರೊ ಕಬಡ್ಡಿ ಇದರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 17 ಮತ್ತು 18 ರಂದು ಸುಳ್ಯದಲ್ಲಿ ನಡೆಯಲಿರುವ ಐತಿಹಾಸಿಕ ಆಹ್ವಾನಿತ ತಂಡಗಳ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್ ರವರನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಯಿತು. ಆಹ್ವಾನ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಖಾದರ್ ರವರು ಕ್ರೀಡೆ ಸೌಹಾರ್ದತೆಗೆ ಉತ್ತಮ ಸೇತುಬಂಧ ಸುಳ್ಯದಲ್ಲಿ ಕ್ರೀಡೆಯ ಮೂಲಕ ಸಾಮರಸ್ಯದ ವಾತಾವರಣ ನಿರ್ಮಿಸಲು ಸಾಧ್ಯವಾಗಿದೆ ನಾನು ಕೂಡ ಯುನಿವರ್ಸಿಟಿ ಮಟ್ಟದಲ್ಲಿ ಕ್ರೀಡಾಪಟು ಆಗಿದ್ದೆ, ಖಂಡಿತಾ ನಾನು ಭಾಗವಹಿಸಲು ಉತ್ಸುಕನಾಗಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಎಸ್. ಸಂಶುದ್ದೀನ್, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಕಬಡ್ಡಿ ಪಂದ್ಯಾಟದ ಸಂಘಟನಾ ಸಮಿತಿ ಅಧ್ಯಕ್ಷ ಸಂಶುದ್ದೀನ್ ಭಾರತ್ ಶಾಮಿಯಾನ, ಕಾರ್ಯದರ್ಶಿ ರಝಕ್ ಪೈಚಾರ್, ಕೋಶಾಧಿಕಾರಿ ಜಿ. ಎ. ಮಹಮ್ಮದ್ ಸಹನ,ಸಂಚಾಲಕ ಶಾಫಿ ಪ್ರಗತಿ, ಧ್ವನಿ, ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಕಾರ್ಯದರ್ಶಿ ರಜ್ಜಾಕ್ ಪೈಚಾರ್, ಸುಳ್ಯತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here