ನನ್ನ ದೇಶ ನನ್ನ ಮಣ್ಣು ಅಭಿಯಾನ-ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಮೃತ್ತಿಕೆ ಸಂಗ್ರಹ

0

ಕಾವು: ದೇಶ ಹುತಾತ್ಮರಾದ ಯೋಧರ ತ್ಯಾಗವನ್ನು ಸ್ಮರಿಸಿ ಗೌರವಿಸುವ ಮತ್ತು ದೇಶದ ಏಕತೆಗಾಗಿ ಪ್ರಧಾನಿ ನರೇಂದ್ರಮೋದಿಯವರ ಪರಿಕಲ್ಪನೆಯ ‘ನನ್ನ ದೇಶ ನನ್ನ ಮಣ್ಣು’ ಅಭಿಯಾನದ ಮೃತ್ತಿಕೆ ಸಂಗ್ರಹಿಸುವ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರ ಸಂಚಾಲಕ ಲೊಕೇಶ್ ಚಾಕೋಟೆ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ಸದಸ್ಯರಾದ ಕೃಷ್ಣಪ್ರಸಾದ್ ಕೊಚ್ಚಿ, ಭಾಸ್ಕರ ಬಲ್ಯಾಯ ಕಾವು, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು, ಪ್ರಮುಖರಾದ ನಾರಾಯಣ ಆಚಾರ್ಯ ಮಳಿ, ನವೀನ್ ನನ್ಯ ಪಟ್ಟಾಜೆ, ಪ್ರಜ್ವಲ್ ಕೆರೆಮಾರು, ಸಂಕಪ್ಪ ಪೂಜಾರಿ ಚಾಕೋಟೆ, ಶಿವಕುಮಾರ್ ಮಾಣಿಯಡ್ಕ, ಸಂದೇಶ್ ಚಾಕೋಟೆ, ಉಮೇಶ್ ಮಾಡನ್ನೂರು, ಗಣೇಶ್ ಪೂವಂದೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here