ಸರತಿ ಸಾಲಿನಲ್ಲಿ ನಿಂತು ಶಾಸಕರಿಗೆ ಮನವಿ ನೀಡಿದ ಸಹೋದರಿ ನಳಿನಿ

0

ಪುತ್ತೂರು: ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ. ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು.

LEAVE A REPLY

Please enter your comment!
Please enter your name here