ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಯೋಗ ಶಿಕ್ಷಣ ಕಾರ್ಯಾಗಾರ

0

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ. 29ರಂದು “ಯೋಗ ಶಿಕ್ಷಣ ಕಾರ್ಯಗಾರ ” ನಡೆಯಿತು. ಸಂವಿತ್ ಸಂಶೋಧನಾ ಕೇಂದ್ರದ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ದೇಲಂಪಾಡಿ ಅವರು ಎವಿಜಿ ಶಾಲಾ ಶಿಕ್ಷಕರಿಗೆ ಯೋಗ ಶಿಕ್ಷಣದ ಕಾರ್ಯಗಾರ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸಹಾಯಕರಾದ ನಾರಾಯಣ ಕುಲಾಲ್, ಭುವನೇಶ್ವರಿ ಸಹಕರಿಸಿದರು. ಶಾಲೆಯ ಶಿಕ್ಷಕಿ ಯಶುಭಾ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಉಷಾ ಕಿರಣ ಕೆ.ಯಸ್ ಸ್ವಾಗತಿಸಿದರು, ಸಂಸ್ಥೆಯ ಶಿಕ್ಷಕಿ ಯಶುಭ ವಂದಿಸಿದರು, ವನಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here