ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದ ಹಿರೇಬಂಡಾಡಿ ಅಝೀಂ ನೀರಿನಲ್ಲಿ ಮುಳುಗಿ ಮೃತ್ಯು

0

ಪುತ್ತೂರು: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೆ.30ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಇಬ್ರಾಹಿಂ ಎಂಬವರ ಮಗ ಮಹಮ್ಮದ್ ಅಝೀಂ (21) ಮೃತ ಯುವಕ.

ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೆ.29ರಂದು ರಾತ್ರಿ ಸ್ನೇಹಿತರೊಂದಿಗೆ ಕೇರಳದ ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು. ಅಂದು ರಾತ್ರಿ ರೂಮ್ ನಲ್ಲಿ ಸ್ಟೇ ಆಗಿದ್ದು, (ಸೆ.30) ಇಂದು ಬೆಳಿಗ್ಗೆ ಕಣ್ಣೂರಿನ ಪಯ್ಯನೂರು ಸಮೀಪ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತದೇಹವನ್ನು ಪೆರಿಯಾರು ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here